Wednesday, April 15, 2026
Home ಅಪರಾಧ ಸುದ್ದಿಪ್ರಯಾಣಿಕರ ಮೇಲೆ ನುಗ್ಗಿ ಬಂದ ಬಸ್​, ಮಗು ಸ್ಥಳದಲ್ಲೇ ಸಾವು

ಪ್ರಯಾಣಿಕರ ಮೇಲೆ ನುಗ್ಗಿ ಬಂದ ಬಸ್​, ಮಗು ಸ್ಥಳದಲ್ಲೇ ಸಾವು

by Raghavendra H A
0 comments

ಹಾವೇರಿ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗಾಗಿ ಕಾದಿದ್ದವರ ಮೇಲೆಯೇ ಸರ್ಕಾರಿ ಬಸ್ ಹರಿದಿದೆ.

ಇಂದು (ಏಪ್ರಿಲ್ 1) ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.

ಪರಿಣಾಮ ಈ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಂತೆಯೇ 2 ವರ್ಷದ ಪುಟ್ಟ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಪ್ಲಾಟ್ ಫಾರ್ಮ್ ನಲ್ಲಿ ನಿಲ್ಲಬೇಕಿದ್ದ ಬಸ್ ಏಕಾಏಕಿ ಪ್ಲಾಟ್ ಫಾರ್ಮ್ ದಾಟಿ ಅಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

ಈ ಅಪಘಾತದಲ್ಲಿ ಕೇವಲ ಮಗು ಮಾತ್ರವಲ್ಲದೆ, ಬಂಕಾಪುರ ಪಟ್ಟಣದ ನಿವಾಸಿಗಳಾದ ವಾಸುದೇವ (44), ಹರ್ಷಾ (6) ಹಾಗೂ ಕಾವ್ಯಾಂಜಲಿ (39) ಎಂಬುವವರಿಗೂ ಗಂಭೀರ ಗಾಯಗಳಾಗಿವೆ.

ಇವರೆಲ್ಲರೂ ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ 2 ವರ್ಷದ ಪುಟ್ಟ ಮಗು ಹಜರತ್ ಅಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

You may also like

Leave a Comment