Saturday, July 11, 2026
Home ರಾಜಕೀಯ ‌ಸುದ್ದಿಆತ್ಮಸಾಕ್ಷಿಗೆ ಧಕ್ಕೆಯಾಗಿರುವುದರಿಂದ ರಾಜೀನಾಮೆ ನೀಡಿದ್ದೇನೆ : ರಾಮಲಿಂಗಾರೆಡ್ಡಿ

ಆತ್ಮಸಾಕ್ಷಿಗೆ ಧಕ್ಕೆಯಾಗಿರುವುದರಿಂದ ರಾಜೀನಾಮೆ ನೀಡಿದ್ದೇನೆ : ರಾಮಲಿಂಗಾರೆಡ್ಡಿ

by Dharmaraju
0 comments

ಬೆಂಗಳೂರು:ರಾಜ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ಗಂಟೆಗಳಲ್ಲಿ ಸರ್ಕಾರಕ್ಕೆ ಮೊದಲ ರಾಜಕೀಯ ಹಿನ್ನಡೆ ಎದುರಾಗಿದೆ.

ತಮಗೆ ನಿರೀಕ್ಷಿಸಿದ್ದ ಬೆಂಗಳೂರು ಅಭಿವೃದ್ಧಿ ಸಂಬಂಧಿತ ಖಾತೆ ನೀಡದಿರುವುದರಿಂದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡ ಅವರು ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯಾದ ತಕ್ಷಣವೇ ಪ್ರಮುಖ ಸಚಿವರೊಬ್ಬರು ರಾಜೀನಾಮೆ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆ ಸರ್ಕಾರದ ಮುಂದಿನ ರಾಜಕೀಯ ನಡೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

You may also like

Leave a Comment