ದೊಡ್ಡಬಳ್ಳಾಪುರ; ತಾಲ್ಲೂಕು ತೊಗರೀಘಟ್ಟ ಗ್ರಾಮದಲ್ಲಿನ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಸವಿತಾ ಮತ್ತು ಮುನಿರಾಜು ದಂಪತಿಯ ಮಗಳು 11ವರ್ಷದ ದಕ್ಷ, ಹಾಗೂ ಆಶಾ ಮತ್ತು ಪ್ರದೀಪ್ ದಂಪತಿಯ ಮಗ 4 ವರ್ಷದ ಧನುಷ್ ಎಂದು ಗುರುತಿಸಲಾಗಿದೆ. ಗುರುಮೂರ್ತಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೋಂಡದಲ್ಲಿ ಈ ಘಟನೆ ನಡೆದಿದೆ.

ಕೃಷಿ ಹೊಂಡಕ್ಕೆ ಸರಿಯಾಗಿ ಭದ್ರತೆ ಮಾಡದೆ ಇಬ್ಬರು ಮಕ್ಕಳ ಸಾವಿಗೆ ಕಾರಣರಾದ ಗುರುಮೂರ್ತಿ ವಿರುದ್ಧ 106 BNS ರೀತಿಯ ಪ್ರಕರಣ ದಾಖಲಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಡಾ.ಎಂ.ಬಿ ನವೀನ್ ಕುಮಾರ್ ರವರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.