57
ಹೊಸಕೋಟೆ: ನಗರದ ಸಮೀಪದ ಕೊಳತೂರು ಗೇಟ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಮೃ*ತಪಟ್ಟಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ನಿವಾಸಿ ಸುಬ್ರಮಣಿ (42) ಮೃ*ತರು. ಸೋಮವಾರ ಬೆಳಗ್ಗೆ 7 ಗಂಟೆಗೆ ಕೋಲಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕೊಳತೂರು ಗೇಟ್ ಬಳಿ ಅಪಘಾತ ಸಂಭವಿಸಿದೆ.
ಶ*ವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.