ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ರಾಜ್ಯ

ರಾಘವೇಂದ್ರ ಹೆಚ್​​.ಎ

4/4/20251 min read

ಬೆಂಗಳೂರು ಗ್ರಾಮಾಂತರ: ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಜಿಲ್ಲೆಯ ಕಲಾವಿದರು/ಸಾಹಿತಿಗಳು 2025-26 ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆ ಸಲ್ಲಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್ ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ ಏ.30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾ ಭಾರತ್​

ವೆಬ್​ ಪೋರ್ಟಲ್​ನಲ್ಲಿ

ನಿಮ್ಮ ಜಾಹಿರಾತು ಪ್ರಕಟಣೆಗೆ ಸ್ಥಳ ಮೀಸಲಾಗಿದೆ.

ಜಾಹಿರಾತಿಗಾಗಿ ಸಂಪರ್ಕಿಸಿ

★★★★★