ಬೆಂಗಳೂರು ಗ್ರಾಮಾಂತರ: ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ
ಜಿಲ್ಲಾ ಸುದ್ದಿ


ಬೆಂ.ಗ್ರಾ.ಜಿಲ್ಲೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಜಿಲ್ಲೆಯ ಕಲಾವಿದರು/ಸಾಹಿತಿಗಳು 2025-26 ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆ ಸಲ್ಲಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್ ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ ಏಪ್ರಿಲ್-30ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾ ಭಾರತ್
ವೆಬ್ ಪೋರ್ಟಲ್ನಲ್ಲಿ
ನಿಮ್ಮ ಜಾಹಿರಾತು ಪ್ರಕಟಣೆಗೆ ಸ್ಥಳ ಮೀಸಲಾಗಿದೆ.
ಜಾಹಿರಾತಿಗಾಗಿ ಸಂಪರ್ಕಿಸಿ
★★★★★