ಚಾಮರಾಜನಗರ: ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೆಂಕಿ: ಇನ್ಸ್ಪೆಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ.
ರಾಜ್ಯ


ಚಾಮರಾಜನಗರ: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿಸಿ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಎಡಳ್ಳಿ ದೊಡ್ಡಿ ಗ್ರಾಮದ ಸಮೀಪ ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ ಇದನ್ನು ಗಮನಿಸದೆ ಚಾಲಕ ತೆರಳುತ್ತಿದ್ದಾಗ, ರಸ್ತೆಯಲ್ಲಿ ತೆರಳುತ್ತಿದ್ದ ಇನ್ಸ್ಪೆಕ್ಟರ್ ಆನಂದಮೂರ್ತಿ ಅವರು ಜೋಳದ ಕಡ್ಡಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ.
ತಕ್ಷಣ ಎತ್ತೆಚ್ಚುಕೊಂಡ ಇನ್ಸ್ಪೆಕ್ಟರ್ ಆನಂದಮೂರ್ತಿ ಅವರು, ತಕ್ಷಣ ಜೀಪ್ನಿಂದ ಇಳಿದು ಟ್ರ್ಯಾಕ್ಟರ್ ನಿಲ್ಲಿಸಿ ಕೂಲಿ ಕಾರ್ಮಿಕರಾದ ಬಸವಣ್ಣ, ಮಹದೇವಸ್ವಾಮಿ, ಸಿದ್ದಪ್ಪ ಎಂಬುವವರನ್ನು ಕೆಳಗಿಳಿಸಿದ್ದಾರೆ. ರವಿ ರವರು ಸ್ವಲ್ಪ ಮುಂದೆ ಹೋಗಿ ಜೋಳದ ಕಡ್ಡಿಯನ್ನು ಕೆಳಗೆ ಸುರಿಯುವಂತೆ ಹೇಳಿ ಅನಾಹುತದಿಂದ ಪಾರುಮಾಡಿದ್ದಾರೆ. ಅಷ್ಟರಲ್ಲಿ ಜೋಳದ ಕಡ್ಡಿ ಸಂಪೂರ್ಣವಾಗಿ ಉರಿದುಹೋಗಿತ್ತು. ಜೊತೆಗೆ ಟ್ರ್ಯಾಕ್ಟರ್ನಲ್ಲಿ ಜೋಳದ ಕಡ್ಡಿ ತುಂಬಲು ಅಳವಡಿಸಿದ್ದ ಮರಗಳು ಸಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಇನ್ಸ್ಪೆಕ್ಟರ್ ಆನಂದಮೂರ್ತಿರವರ ಸಮಯಪ್ರಜ್ಞೆಯಿಂದ ರೈತನ ಟ್ರಾಕ್ಟರ್ ಮತ್ತು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.