ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ: ವಾಹನ ಸವಾರ ಸ್ಥಳದಲ್ಲೇ ಸಾವು
ಕ್ರೈಮ್ಸ್ಥಳೀಯ ಸುದ್ದಿ


ಹೊಸಕೋಟೆ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಹೊಸಕೋಟೆಯ ಹೆತ್ತಾಕ್ಕಿ ಗ್ರಾಮದ 26 ವರ್ಷದ ಪ್ರಶಾಂತ್ ಎಂಬ ಯುವಕ ಸಾವನ್ನಪ್ಪಿರುವ ಘಟನೆ ಕೊಳತೂರು ಗೇಟ್ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಬೈಕ್ ಸವಾರ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಶಾಂತ್ ಪ್ರಾಣಪಕ್ಷಿ ಹಾರಿಹೋಗಿದೆ. ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತ ಯುವಕ ಪ್ರಶಾಂತ್ ಮನೆಯಿಂದ ಹೊಸಕೋಟೆಗೆ ಹೊಗಿತ್ತಿದ್ದ ಸಮಯದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಗಂಭೀರವಾದ ಗಾಯಗಳು ಆಗಿ ಸಾವನ್ನಪ್ಪಿದ್ದಾನೆ.