ತೆರಿಗೆ ವಸೂಲಿ ಹಾಗೂ ಇ-ಖಾತೆ ಆಂದೋಲನದಲ್ಲಿ ಜಿಲ್ಲೆಗೆ ದೊಡ್ಡಬಳ್ಳಾಪುರವು ಪ್ರಥಮ ಸ್ಥಾನ

ಜಿಲ್ಲಾ ಸುದ್ದಿ

ರಾಘವೇಂದ್ರ ಹೆಚ್.ಎ

5/13/20251 min read

ದೊಡ್ಡಬಳ್ಳಾಪುರ ನಗರಸಭೆಯೂ ತೆರಿಗೆ ವಸೂಲಿ ಹಾಗೂ -ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ಹೇಳಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕುರಿತು ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದೆ ಎಂದರು.

ಬಳಿಕ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, -ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.

ಉಪಾಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ನಗರದ ಕೆ.ಆರ್.ಮಾರುಕಟ್ಟೆ ಪ್ರದೇಶ, ಎಲ್ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ 10ಕೋಟಿ ಅನುದಾನ ದೊರೆತಿದೆ ಎಂದರು.