ಅಧಿಕ ಬಡ್ಡಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ವಂಚನೆ: ಫೈನಾನ್ಸ್ ಹೆಸರಿನಲ್ಲಿ ಧೋಖಾ.

ಸ್ಥಳೀಯ ಸುದ್ದಿಕ್ರೈಮ್

ಧರ್ಮ ಬಸವನಪುರ.

7/7/20251 min read

ಬೆಂಗಳೂರು: ಎ ಆಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಕೇರಳ ಮೂಲದ ದಂಪತಿ ಅಧಿಕ ಬಡ್ಡಿ ಆಸೆ ತೋರಿಸಿ ಹಲವರಿಂದ ಕೋಟ್ಯಂತರ ರೂ. ಪಡೆದು ವಂಚಿಸಿ ಪರಾರಿಯಾಗಿದ್ದಾರೆ. ಆರೋಪಿತರ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಮೂರ್ತಿನಗರದ ಪಿ.ಟಿ.ಸ್ಯಾವಿಯೋ ಎಂಬುವವರು ನೀಡಿದ ದೂರಿನ ಮೇರೆಗೆ ರಾಮಮೂರ್ತಿನಗರ ೮ನೇ ಮುಖ್ಯರಸ್ತೆಯ ಎ ಆಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಎ.ವಿ.ಟಾಮಿ ಮತ್ತು ಆತನ ಪತ್ನಿ ಶಿನಿ ಟಾಮಿ ವಿರುದ್ಧ ಚಿಟ್ ಫಂಡ್ ಕಾಯ್ದೆ, ಬಿಎನ್‌ಎಸ್ ವಿವಿಧ ಕಲಂಗಳ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ಇತ್ತೀಚೆಗೆ ಕಚೇರಿ ಬಂದ್ ಆಗಿರುವುದು ಗಮನಕ್ಕೆ ಬಂತು. ಅಕ್ಕಪಕ್ಕದವರನ್ನು ವಿಚಾರಿಸಿದಾಗ ದಂಪತಿ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಇಬ್ಬರ ಮೊಬೈಲ್‌ಗಳು ಸ್ವಿಚ್ಡ್ ಆಫ್ ಆಗಿವೆ. ಪರಾರಿಯಾಗಿರುವ ದಂಪತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ ಟಾಮಿ ದಂಪತಿ ಅಂದಾಜು ₹14 ಕೋಟಿಗೂ ಅಧಿಕ ಹಣ ವಂಚಿಸಿರುವ ಸಾಧ್ಯತೆಯಿದೆ. ಸದ್ಯ ಇಬ್ಬರೂ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಆರೋಪಿಗಳು ನೂರಕ್ಕೂ ಹೆಚ್ಚು ಮಂದಿಗೆ ವಂಚಿಸಿರುವ ಕಾರಣ, ಈ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.