ಮಂಡ್ಯ:Instagram ನಲ್ಲಿ ಪರಿಚಯ: ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ.

ಕ್ರೈಮ್ಜಿಲ್ಲಾ ಸುದ್ದಿ

ಧರ್ಮ ಬಸವನಪುರ.

6/26/20251 min read

ಮಂಡ್ಯ: ಇನ್ಸ್ಟಾಗ್ರಾಮ್‌‍ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಅರಳಿದ ಪ್ರೇಮ ಸಲುಗೆ ಬೆಳಸಿ ಪ್ರೀತಿಯ ನಾಟಕವಾಡಿ, ಜಾಲಿರೈಡ್‌ಗೆ ಕರೆದೊಯ್ದು ಆಕೆಯನ್ನು ಕೊಲೆ ಮಾಡಿದ್ದ ಎಂಜಿನಿಯರಿಂಗ್‌ ಪದವಿದರನನ್ನು ಕಿಕ್ಕೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿಗೆ ಸುಂದರ ಕುಟುಂಬವಿದ್ದು, ಮುದ್ದಾದ ಎರಡು ಮಕ್ಕಳು ಸಹ ಇದ್ದಾರೆ. ಈಕೆಯ ಗಂಡ ಆಟೋ‌ ಡ್ರೈವರ್, ಈಕೆ ಗಾರ್ಮೆಂಟ್ಸ್‌ಗೆ ಕೆಲಸಕ್ಕೆ ಹೋಗುತ್ತಿದ್ದಳು. ಈಕೆ ಯಾವಾಗಲೂ ಫೇಸ್‌ಬುಕ್‌ನಲ್ಲಿ ಚಾಟ್ ಮಾಡುವ ಹವ್ಯಾಸ ಸಹ ಇತ್ತು. ಈ ಪ್ರೀತಿ ಕಳೆದ ಗುರುವಾರ ರಾತ್ರಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಠಿ ಗ್ರಾಮ ಪುನೀತ್ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ರಿಕ್ವೆಸ್ಟ್ ಕಳಿಸಿದ್ದಳು. ತನ್ನ ಅಕೌಂಟ್‌ಗೆ ರಿಕ್ವೆಸ್ಟ್ ಬಂದ್ದದ್ದೆ ತಡ ಈ ಪುನೀತ್ ಅಕ್ಸೇಪ್ಟ್ ಮಾಡಿದ್ದ.ಇದಾದ ನಂತರ ಪ್ರೀತಿ ಪುನೀತನಿಗೆ ಹಾಯ್ ಎಂದು ಮೆಸೇಜ್ ಮಾಡಿದ್ದಾಳೆ. ಇದಕ್ಕೆ ಪ್ರತಿಯಾಗಿ ಪುನೀತ್ ರಿಪ್ಲೇ ಮಾಡಿದ್ದ. ಬಳಿಕ ಇಬ್ಬರು ಪರಸ್ಪರ ರಾತ್ರಿ ಇಡೀ ಮೆಸೆಜ್ ಮಾಡಿದ್ದು, ಶುಕ್ರವಾರ ಬೆಳಗ್ಗೆ ಪ್ರೀತಿ ಪುನೀತ್ ಜೊತೆ ಪೋನ್ ನಂಬರ್ ಎಕ್ಸ್ ಚೆಂಜ್ ಮಾಡಿದ್ದಾಳೆ. ಬಳಿಕ ಒಂದೇ ದಿನದಲ್ಲಿ ಮಾತುಕತೆ ನಡೆದಿದೆ.

ಕಳೆದ ಭಾನುವಾರ ಮೈಸೂರಿಗೆ ಒಟ್ಟಿಗೆ ಕಾರಿನಲ್ಲಿ ತೆರಳಿದ್ದರು.ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳಲ್ಲಿ ಸುತ್ತಾಡಿ ನಂತರ ಕೆ.ಆರ್‌ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶಕ್ಕೆ ಬಂದಿದ್ದಾರೆ. ಅಲ್ಲಿ ಸಣ್ಣ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಆ ವೇಳೆ ಪುನೀತ್‌ ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ನಂತರ ಆಕೆಯ ಮೇಲಿದ್ದ ಚಿನ್ನಾಭರಣ ದೋಚಿದ್ದಾನೆ. ನಂತರ ಯಾರಿಗೂ ತಿಳಿಯದಂತೆ ಶವವನ್ನು ತನ್ನ ಊರಿನಲ್ಲಿದ್ದ ಜಮೀನಿಗೆ ಸಾಗಿಸಿ ಸೌದೆಗಳಿಂದ ಮುಚ್ಚಿಟ್ಟು ಪರಾರಿಯಾಗಿದ್ದ.

ಈ ನಡುವೆ ಮನೆಯವರು ಪ್ರೀತಿ ನಾಪತ್ತೆಯಾದ ಬಗ್ಗೆ ಹುಡುಕುತ್ತಿದ್ದರು. ನಿನ್ನೆ ಪ್ರೀತಿ ಮೊಬೈಲ್‌ ಸ್ವೀಕರಿಸದಿದ್ದಾಗ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.ನಂತರ ತನಿಖೆ ಕೈಗೊಂಡು ಮೊಬೈಲ್‌‍ಗೆ ಬಂದಿದ್ದ ಕರೆಗಳನ್ನು ಪರಿಶೀಲಿಸಿದಾಗ ಆರೋಪಿ ಪುನಿತ್‌ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಶವ ಮುಚ್ಚಿಟ್ಟಿದ್ದ ಸ್ಥಳವನ್ನು ಪತ್ತೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಕೇವಲ 24 ತಾಸಿನಲ್ಲಿ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.