ಜೂ.27ಕ್ಕೆ ದೊಡ್ಡಬಳ್ಳಾಪುರದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ದತೆ

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್​.ಎ

6/23/20251 min read

ದೊಡ್ಡಬಳ್ಳಾಪುರ: ಪ್ರತಿ ವರ್ಷದಂತೆ ಈ ವರ್ಷವು ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡ ರ 516ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಂಪೇಗೌಡ ಜಯಂತ್ಯೋತ್ಸವ ಆಚರಣಾ ಸಮಿತಿ ತಾಲ್ಲೂಕು ಅಧ್ಯಕ್ಷ ಟಿ.ವಿ ಲಕ್ಷ್ಮೀನಾರಾಯಣ್​ ಅವರು ತಿಳಿಸಿದರು.

ನಗರದ ಒಕ್ಕಲಿಗರ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು,

ಜೂನ್​.27ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ನೆಲದಾಂಜನೆಯ ಸ್ವಾಮಿ ದೇವಾಲಯದ ಆವರಣದಿಂದ ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲ್ಲೂಕು ಕಚೇರಿಯ ವರೆಗೆ ಬೆಳ್ಳಿ ರಥದಲ್ಲಿ ನಾಡಪ್ರಭು ಶ್ರೀಕೆಂಪೇಗೌಡ ರ ಪ್ರತಿಮೆಯನ್ನು ಮೆರವಣಿಗೆ ಮಾಡಲಾಗುವುದು. ಈ ವೇಳೆ ರಾಜ್ಯದ ಹೆಸರಾಂತ ಜಾನಪದ ಕಲಾವಿದರ ತಂಡಗಳು ಹಾಗೂ ಇನ್ನೂ ಅನೇಕ ವಾದ್ಯಗಳು ಈ ಮೆರವಣಿಗೆಯಲ್ಲಿ ಭಾಗಿಯಾಗಲಿದೆ ಎಂದರು.

ಈ ಸಮಾರಂಭದಲ್ಲಿ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಭ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು. ಇದೇ ವೇಳೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ನರಸಿಂಹ, ತಿ.ರಂಗರಾಜು, ಆನಂದಮೂರ್ತಿ, ಶಿವಣ್ಣ, ಮಂಡಿಬ್ಯಾಡರಹಳ್ಳಿ ಅಶ್ವತ್ಥನಾರಾಯಣ ಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ, ಹೆಚ್​.ಎಂ ಶ್ರೀನಿವಾಸ್​ ಗೌಡ, ಅಶ್ವತ್ಥಗೌಡ, ದೀಪು ಗೌಡ, ಸಿ.ನಾಗೇಶ್​ ಗೌಡ, ಶಿವಕುಮಾರ್​, ಅಶೋಕ್​ ಕುಮಾರ್​, ಲಕ್ಷ್ಮಮ್ಮ ಮತ್ತು ರತ್ನಮ್ಮ ಇತರರು ಇದ್ದರು.