ಮಹಿಳೆ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ದುಷ್ಕರ್ಮಿಗಳು ಪರಾರಿ, ವೀಡಿಯೋ ನೋಡಿ

ಕ್ರೈಮ್ಸ್ಥಳೀಯ ಸುದ್ದಿ

Raghavendra H A

5/21/20251 min read

ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್​ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿಗಳು ಬೈಕ್​ನಲ್ಲಿ ಹೋಗುವಾಗ ಹಿಂಬದಿ ಮತ್ತೊಂದು ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್​ಮೆಂಟ್​ ಬಳಿ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್​ ದಂಪತಿಗಳು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್​ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಂಬರ್ ಪ್ಲೇಟ್​ ಇಲ್ಲದ ಬೈಕ್​ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್​ ಹಾಗೂ ಹೆಲ್ಮೆಟ್​ ಧರಿಸಿಕೊಂಡು ದಂಪತಿಗಳ ಬೈಕ್​ ಹಿಂಬಾಲಿಸಿಕೊಂಡು ಬಂದು ರೈಡಿಂಗ್​ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರವನ್ನು ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.

ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿಗಳು ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.