ಮೆಳೇಕೋಟೆ ಬಳಿ ಬಸ್ ನಿಂದ ಉರುಳಿಬಿದ್ದು ಮಹಿಳೆ ಸಾವು

ಸ್ಥಳೀಯ ಸುದ್ದಿಕ್ರೈಮ್

RAGHAVENDRA H A

7/9/20251 min read

ಚಲಿಸುತ್ತಿದ್ದ ಬಸ್​ ನಿಂದ ಆಯಾ ತಪ್ಪಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿ ಬಳಿ ನಡೆದಿದೆ.

ಮೃತ ಮಹಿಳೆಯನ್ನು ದೊಡ್ಡರಾಯಪ್ಪನಹಳ್ಳಿ ನಿವಾಸಿ ಶಶಿಕಲಾ ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ನಲ್ಲಿ ದೊಡ್ಡಬಳ್ಳಾಪುರದಿಂದ ಮೆಳೇಕೋಟೆಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನ ಹಿಂದಿನ ಬಾಗಿಲಿನಿಂದ ಆಯಾತಪ್ಪಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ಠಾಣಾ ಇನ್ಸ್​ಪೆಕ್ಟರ್​ ಸಾದಿಕ್​ ಪಾಷ ಹಾಗೂ ಸಿಬ್ಬಂದಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. 

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK